ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನ ಬಂಧಿಸಿದ ಪೊಲೀಸ್
02:27 PM Aug 31, 2024 IST | BC Suddi
Advertisement
ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಶಂಕಿತ ಉಗ್ರನನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ತಮಿಳುನಾಡಿನ ಹಿಜ್ಬುತ್ ಥರೀರ್ ಪ್ರಕರಣದ ಆರೋಪಿ ಅಜೀಜ್ ಅಹ್ಮದ್ ಶುಕ್ರವಾರ ಬೆಳಗ್ಗೆ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು.
ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್ಐಎಗೆ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್ ಅಹ್ಮದ್ನನ್ನು ಬಂಧಿಸಿದ್ದಾರೆ.
Advertisement