ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಒಂದೇ ಕುಟುಂಬದ 10 ಕ್ಕೂ ಹೆಚ್ಚು ಮಂದಿ ಸಾವು.!
ಹಾವೇರಿ : ಇಂದು ಬೆಳ್ಳಂಬೆಳಗ್ಗೆ ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಹತ್ತಕ್ಕೂ ಹೆಚ್ಚು ಜನರು ಸಾವನಪ್ಪಿದು ಇದೀಗ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಹಾವೇರಿಯ ಎಸ್ ಪಿ ಅಂಶಿ ಕುಮಾರ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಇಬ್ಬರು ಪುರುಷರು ಸೇರಿದಂತೆ 9 ಮಹಿಳೆಯರು ಸಾವನಪ್ಪಿದ್ದಾರೆ. ;
ಟಿಟಿಯಲ್ಲಿ ಸುಮಾರು 16 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತ ದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಂತವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾಸ್ಥಳಕ್ಕೆ ಬ್ಯಾಡಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಚಿಂಚೋಳಿಯ ಮಾಯಮ್ಮ ದೇವಿ ದರ್ಶನ ಪಡೆದು ವಾಪಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಮೂಲದವರು ಎಂದು ತಿಳಿದು ಬಂದಿದೆ. ಪರಶುರಾಮ, ಭಾಗ್ಯ, ನಾಗೇಶ್, ವಿಶಾಲಾಕ್ಷಿ,ಅರ್ಪಿತ,ಸುಭದ್ರ, ಬಾಯಿ, ಪುಣ್ಯ, ಮಂಜುಳಾಬಾಯಿ, ಆದರ್ಶ, ಮಾನಸ, ಅಪರೂಪ, ಮಂಜುಳಾ ಮೃತಪಟ್ಟವರ ಎಂದು ಗುರುತಿಸಲಾಗಿದೆ.