For the best experience, open
https://m.bcsuddi.com
on your mobile browser.
Advertisement

ಬೋಗಸ್ ಗ್ಯಾರಂಟಿಗಳಿಗೆ ಮರುಳಾಗಬೇಡಿ : ಬಿ.ವೈ ವಿಜಯೇಂದ್ರ

04:41 PM Feb 01, 2024 IST | Bcsuddi
ಬೋಗಸ್ ಗ್ಯಾರಂಟಿಗಳಿಗೆ ಮರುಳಾಗಬೇಡಿ   ಬಿ ವೈ ವಿಜಯೇಂದ್ರ
Advertisement

ಚಿಕ್ಕಮಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವೋಟ್ ಕೊಡದೆ ಹೋದ್ರೆ ಗ್ಯಾರಂಟಿ ರದ್ದಾಗಬಹುದು ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದು ಇದಕ್ಕೆ ಪ್ರತಿಕ್ರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದ್ದಾರೆ

ಮಾಗಡಿ ಶಾಸಕ ಬಾಲಕೃಷ್ಣ ಮಾಡಿರುವುದು ಬ್ಲಾಕ್ ಮೇಲ್, ಕಾಂಗ್ರೆಸ್ಸಿಗರಿಗೆ ನಾಚಿಕೆ ಆಗಬೇಕು ಬೋಗಸ್ ಗ್ಯಾರಂಟಿಯಿಂದಾಗಿ ಜನರು ಬೀದಿಗೆ ಬರುವ ಸ್ಥಿತಿ ಬಂದಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಬಸ್ ಇಲ್ಲ, ರೈತರ ಪಂಪ್ ಸೆಟ್‌ಗೆ ಕರೆಂಟ್ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.

ರಾಮಮಂದಿರ ಪುನರ್ ಪ್ರತಿಷ್ಠಾಪನೆ ಬಳಿಕ ದೇಶದ ವಾತಾವರಣ ಬದಲಾಗಿದೆ ಆದ್ದರಿಂದ ಕಾಂಗ್ರೆಸ್ ಭಯಭೀತವಾಗಿದೆ. ಹಾಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದ ಅವರು, ಜನರು ಬೋಗಸ್ ಗ್ಯಾರಂಟಿಗಳಿಗೆ ಮರುಳಾಗಬಾರದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

Advertisement

Author Image

Advertisement