ಬ್ರಿಜ್ ಭೂಷಣ್ ಪುತ್ರನ ಬೆಂಗಾವಲು ವಾಹನ ಬೈಕ್ಗೆ ಡಿಕ್ಕಿ – ಇಬ್ಬರು ಯುವಕರ ಸಾವು
05:20 PM May 29, 2024 IST
|
Bcsuddi
Advertisement
ಲಕ್ನೋ: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚುನರ್ ಎಸ್ಯುವಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ.
Advertisement
ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ರೇಹಾನ್ (17) ಮತ್ತು ಶಹಜಾನ್ (24) ಎಂಬ ಯುವಕರು ಔಷಧಿ ಖರೀದಿಸಲು ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಎಸ್ಯುವಿ ಡಿಕ್ಕಿ ಹೊಡೆದಿದೆ. ಬಳಿಕ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಮೃತರ ತಾಯಿ ಚಂದಾ ಬೇಗಂ ಎಂಬವರು ದೂರು ದಾಖಲಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
Next Article