ಬ್ರೇಕಿಂಗ್: ಮುನಿರತ್ನನನ್ನ ವಶಕ್ಕೆ ಪಡೆದ ಕಗ್ಗಲೀಪುರ ಪೊಲೀಸರು
10:01 AM Sep 20, 2024 IST | BC Suddi
Advertisement
ಬೆಂಗಳೂರು: ಜಾತಿ ನಿಂದನೆ, ಬೆದರಿಕೆ ಕೇಸ್ನಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಶಾಸಕ ಮುನಿರತ್ನ ಅವರನ್ನು ರಾಮನಗರದ ಕಗ್ಗಲೀಪುರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು. ಮುನಿರತ್ನ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಗೆ ಮತ್ತೊಂದು ದೂರು ದಾಖಲಾಗಿದೆ. ಮಹಿಳೆಯೊಬ್ಬರು ಖುದ್ದು ಠಾಣೆಗೆ ಬಂದು ಅತ್ಯಾಚಾರ ಕೇಸ್ ದಾಖಲಿಸಿದ್ದಾರೆ. ಖಾಸಗಿ ರೆಸಾರ್ಟ್ ನಲ್ಲಿ ನನ್ನ ವಿರುದ್ಧ ಅತ್ಯಾಚಾರವಾಗಿದೆ ಎಂದು ಸಂತ್ರಸ್ತೆ ಏಳು ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಅದರಲ್ಲಿ ಶಾಸಕ ಮುನಿರತ್ನ A1 ಆರೋಪಿಯಾಗಿದ್ದಾರೆ. ಇನ್ನು ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ್ ಹಾಗೂ ಲೋಕಿ ಎಂಬುವರ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆ ಆರಂಭಿಸಿರುವ ಕಗ್ಗಲೀಪುರ ಪೊಲೀಸರು ಮುನಿರತ್ನ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Advertisement