ಭತ್ತದ ಸಸಿ ನಾಟಿ ಮಾಡುವ ವೇಳೆ ಸಿಡಿಲು ಬಡಿದು 15 ಮಹಿಳೆಯರಿಗೆ ಗಾಯ.!
07:47 AM Aug 12, 2024 IST
|
BC Suddi
Advertisement
Advertisement
ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತದ ಸಸಿ ನಾಟಿ ಮಾಡುವ ವೇಳೆ ಸಿಡಿಲು ಬಡಿದು 15 ಮಹಿಳೆಯರು ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕೆ.ಬಿ. ಚಂದ್ರು ಎಂಬವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ಭತ್ತದ ಸಸಿ ನಾಟಿ ಮಾಡುತ್ತಿದ್ದರು. ಈ ವೇಳೆ ದಿಢೀರನೆ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು. ಸಿಡಿಲು ಬಡಿದು 15 ಮಹಿಳೆಯರಿಗೆ ಗಾಯಗಳಾಗಿವೆ.
ಸಿಡಿಲು ಬಡಿದು ಲತಾ(35) ಎಂಬುವರ ಸ್ಥಿತಿ ಗಂಭೀರವಾಗಿದ್ದು, ಗಾಯಗೊಂಡ ಎಲ್ಲಾ ಮಹಿಳೆಯರನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
Next Article