For the best experience, open
https://m.bcsuddi.com
on your mobile browser.
Advertisement

ಭಾರೀ ಗುಡ್ಡ ಕುಸಿತ: ಹಾಸನ-ಮಂಗಳೂರು ರೈಲು ಸಂಚಾರ ಮತ್ತೆ ಸ್ಥಗಿತ

09:51 AM Aug 10, 2024 IST | BC Suddi
ಭಾರೀ ಗುಡ್ಡ ಕುಸಿತ  ಹಾಸನ ಮಂಗಳೂರು ರೈಲು ಸಂಚಾರ ಮತ್ತೆ ಸ್ಥಗಿತ
Advertisement

ಮಂಗಳೂರು: ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಶುಕ್ರವಾರ(ಆಗಸ್ಟ್ 9) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ.

ಬಾಳ್ಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.

Author Image

Advertisement