For the best experience, open
https://m.bcsuddi.com
on your mobile browser.
Advertisement

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣಿನಡಿಗೆ ಸಿಲುಕಿದ ಕಾರ್ಮಿಕರು..!

02:56 PM Jul 03, 2024 IST | Bcsuddi
ಮಂಗಳೂರು  ಕಟ್ಟಡ ಕಾಮಗಾರಿ ವೇಳೆ ಮಣ್ಣಿನಡಿಗೆ ಸಿಲುಕಿದ ಕಾರ್ಮಿಕರು
Advertisement

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ಬಲ್ಮಠದಲ್ಲಿ ನಡೆದಿದೆ.

ಖಾಸಗಿ ಕಟ್ಟದ ನಿರ್ಮಾಣ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಮಣ್ಣಿನಡಿ ಇಬ್ಬರು ಕೂಲಿ ಕಾರ್ಮಿಕರು ಸಿಲುಕಿಕೊಂಡಿದ್ದು, ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ನಡೆದಿದೆ.

ಸ್ಥಳಕ್ಕೆ ಎಸ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಮಣ್ಣು ತೆರವುಗೊಳಿಸಿ, ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆದಿದೆ.

Advertisement

Author Image

Advertisement