For the best experience, open
https://m.bcsuddi.com
on your mobile browser.
Advertisement

ಮಂಗಳೂರು ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್: ಅಷ್ಟಕ್ಕೂ ಅವರಿಗೆ ಹಿಂದೂ ದೈವ ದೇವರ ಮೇಲೆ ಭಕ್ತಿ ಯಾಕೆ ಗೊತ್ತಾ?

12:23 PM Jul 15, 2024 IST | Bcsuddi
ಮಂಗಳೂರು ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಾಲಿವುಡ್ ನಟಿ ಕತ್ರಿನಾ ಕೈಫ್  ಅಷ್ಟಕ್ಕೂ ಅವರಿಗೆ ಹಿಂದೂ ದೈವ ದೇವರ ಮೇಲೆ ಭಕ್ತಿ ಯಾಕೆ ಗೊತ್ತಾ
Advertisement

ಮಂಗಳೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ಮಂಗಳವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ತಮ್ಮ ಬರ್ತ್‌ಡೇಗೂ ಮುನ್ನ ಅವರು ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.

ನಟಿ ಕತ್ರಿನಾ ಕೈಫ್ ಮುಸ್ಲಿಂ. ಆದರೆ ಅವರು ಹಿಂದೂ ಆಗಿರುವ ವಿಕ್ಕಿ ಕೌಶಲ್ ಅವರನ್ನು ಮದುವೆಯಾಗಿದ್ದಾರೆ. ಹೀಗಾಗಿ ಅವರಿಗೆ ಹಿಂದೂ ದೇವರ ಬಗ್ಗೆ ಭಕ್ತಿ ಇದೆ. ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್. ರಾಹುಲ್ ಹಾಗೂ ನಟ ಸುನಿಲ್ ಶೆಟ್ಟಿ ಕುಟುಂಬ ಉಳ್ಳಾಲದ ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಭಾಗಿಯಾಗಿದ್ದರು.

Advertisement

ಮಹಿಳೆಯರಿಗೆ ರಾತ್ರಿ ಹೊತ್ತು ಕಟ್ಟೆಯ ಒಳಗೆ ಪ್ರವೇಶ ಇಲ್ಲದ ಕಾರಣ ಕತ್ರಿನಾ, ಅಥಿಯಾ ಮತ್ತು ರೇಷ್ಮಾ ದೈವಸ್ಥಾನದ ಹೊರಗಡೆಯಿಂದ ಕೋಲವನ್ನು ವೀಕ್ಷಿಸಿದರು. ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದರು.

ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲವಾದವರು. ಆಗಾಗ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಬಾಲಿವುಡ್‌ನ ಉಳಿದವರಿಗೂ ಈ ಬಗ್ಗೆ ನಂಬಿಕೆ ಮೂಡಿದೆ. ಸುನೀಲ್ ಶೆಟ್ಟಿ ಅವರು ಮಂಗಳೂರು ಮೂಲದವರು. ಅವರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಾರೆ.

ಕುತ್ತಾರುನಲ್ಲಿ ಕೊರಗಜ್ಜನ ಕೋಲ ನೀಡುವ ಮೊದಲು ಟೀಂ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್ ಮಂಗಲೂರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪತ್ನಿ ಸಮೇತರಾಗಿ ಭೇಟಿ ನೀಡಿದರು.

ದೇವಿಯ ದರ್ಶನ ಪಡೆದ ಕೆ.ಎಲ್ ರಾಹುಲ್, ಪತ್ನಿ ಆಥಿಯಾ ಶೆಟ್ಟಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕ ಗೋಪಾಲಕೃಷ್ಣ ಉಪಾಧ್ಯಾಯ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.

Author Image

Advertisement