ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಸಿಬಿಐ ಕೇಸ್ ವಾಪಾಸ್ - ಪಾರದರ್ಶಕವಾಗಿದ್ದರೆ ಕೇಸ್ ಹಿಂಪಡೆದಿದ್ದೇಕೆ ಕಟೀಲು ವ್ಯಂಗ್ಯ

04:23 PM Nov 24, 2023 IST | Bcsuddi
Advertisement

ಮಂಗಳೂರು : ಸಚಿವ ಸಂಪುಟದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಿಬಿಐ ಕೇಸ್ ವಾಪಾಸ್ ಪಡೆದ ವಿಚಾರದಲ್ಲಿ ಕಿಡಿಕಾರಿದ ಸಂಸದ ನಳಿನ್ ಕುಮಾರ್ ಕಟೀಲು, ಇವರು ಪ್ರಾಮಾಣಿಕರು, ಪಾರದರ್ಶಕವಾಗಿದ್ದರೆ ಕೇಸ್ ಹಿಂಪಡೆಯುವ ಅಗತ್ಯವಿಲ್ಲ. ಇವರಿಗೆ ಭಯ ಯಾಕೆ, ಇವರ ಪ್ರಾಮಾಣಿಕತೆ ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ ಎಂದು ವ್ಯಂಗ್ಯವಾಡಿದರು. ಸಿಬಿಐ ತನಿಖೆ ಹೊತ್ತಲ್ಲಿ ಸರ್ಕಾರ ಕೇಸ್ ಅನ್ನು ವಾಪಾಸ್ ತೆಗೆಯೋದು ಸರಿಯಲ್ಲ. ಇದು ಸರ್ಕಾರದ ಭ್ರಷ್ಟಾಚಾರವನ್ನು ಸಾರ್ವಜನಿಕವಾಗಿ ತಿಳಿಸುತ್ತದೆ. ಇದನ್ನು ನಾನು ಖಂಡಿಸುತ್ತೇನೆ. ಹಾಗಂತ ಇದೊಂದೇ ಕೇಸ್ ಇಲ್ಲ, ಇಡಿಯಲ್ಲೂ ಸಾಕಷ್ಟು ಕೇಸ್‌ಗಳಿವೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.

Advertisement

Advertisement
Next Article