For the best experience, open
https://m.bcsuddi.com
on your mobile browser.
Advertisement

ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

06:12 PM May 21, 2024 IST | Bcsuddi
ಮಂಗಳೂರು  ಬಿಜೆಪಿಯವರು ಬಜೆಟ್ ಓದುವುದಿಲ್ಲ  ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು
Advertisement

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಮಿಸಿದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಹಿಂದೆ ನೀರಾವರಿಗೆ 16000 ಕೋಟಿ ರೂ. ಇಡಲಾಗುತ್ತಿತ್ತು. ಈ ವರ್ಷ 18 ಸಾವಿರ ಕೋಟಿ ರೂ. ಇಟ್ಟಿದ್ದೇವೆ. ನಾವು ಏನು ಮಾಡಿಲ್ಲ ಎಂದು ಬಿಜೆಪಿಯವರು ಹೇಳುವುದೆಂದರೆ ಏನು? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಮಾಡಿದ್ದೇವೆ ಎಂದು ಜನರಿಗೆ ತಿಳಿಸಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುತ್ತಾರೆ, ನೀವು ಸುಳ್ಳು ಹೇಳುತ್ತೀರಾ ? ಎಂದು ಮಾಧ್ಯಮದವರಿಗೇ ಪ್ರಶ್ನಿಸಿದರು. ನಾವು ಗ್ಯಾರಂಟಿಯನ್ನು ಸೇರಿಸಿ 1.20 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದೇವೆ. ಅಭಿವೃದ್ಧಿ ಶೂನ್ಯ ಅಭಿವೃದ್ಧಿ ಶೂನ್ಯ ಅಂತಾರೆ. ಬಡವರಿಗೆ ಆರ್ಥಿಕವಾಗಿ ಸಬಲತೆ ಕೊಡುವುದು ಅಭಿವೃದ್ಧಿಯಲ್ಲವೇ. ಈ ದೇಶಕ್ಕೆ ಬರೀ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕವಾಗಿ ಸಾಮಾಜಿಕವಾಗಿ ಸ್ವಾತಂತ್ರ್ಯ ಬಂದರೆ ಮಾತ್ರ ಸ್ವಾತಂತ್ರ್ಯ ಬಂದಂತೆ ಎಂದು ಅಂಬೇಡ್ಕರ್ ಹೇಳಿದ್ದರು. ಆ ಬಳಿಕ ಯಾವುದೇ ಪ್ರಶ್ನೆಗೆ ಪ್ರತಿಕ್ರಿಯಿಸದೇ ಅವರು ತೆರಳಿದ್ದಾರೆ.

Author Image

Advertisement