For the best experience, open
https://m.bcsuddi.com
on your mobile browser.
Advertisement

ಮಂಡ್ಯದ ಮೇಲುಕೋಟೆ ಶಿಕ್ಷಕಿ ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣ : ಆರೋಪಿ ಬಂಧನ

05:03 PM Jan 24, 2024 IST | Bcsuddi
ಮಂಡ್ಯದ ಮೇಲುಕೋಟೆ ಶಿಕ್ಷಕಿ ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣ   ಆರೋಪಿ ಬಂಧನ
Advertisement

ಮಂಡ್ಯ: ರಾಜ್ಯವನ್ನೇ ಬೆಚ್ಚಿ ಬೀಳಿಸಿದಂತಹ ಮಂಡ್ಯದ ಮೇಲುಕೋಟೆ ಶಿಕ್ಷಕಿ ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣ ಬೆಳಕಿಗೆ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಮಾಣಿಕ್ಯನಹಳ್ಳಿ ಗ್ರಾಮದ ನಿತೀಶ್ ಎಂದು ಗುರುತಿಸಲಾಗಿದೆ.

ಆರೋಪಿ ನಿತೀಶ್ ಹಾಗೂ ದೀಪಿಕಾ ಒಂದೇ ಊರಿನವರು ಹಾಗೂ ನಿತೀಶ್ ಆಕೆಯನ್ನು ಅಕ್ಕಾ ಎಂದೇ ಕರೆಯುತ್ತಿದ್ದನು ಆದರೆ ಜ.20 ರಂದು ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದು ಹಾಗೂ ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ ಸ್ಕೂಟರ್ ಪತ್ತೆಯಾಗಿತ್ತು ಹಾಗೂ ಅಲ್ಲದೆ ದೀಪಿಕಾಳನ್ನು ಎಳೆದಾಡುತ್ತಿದ್ದ ದೃಶ್ಯವನ್ನು ಬೆಟ್ಟದ ಮೇಲಿನಿಂದ ಪ್ರವಾಸಿಗರೊಬ್ಬರು ವೀಡಿಯೋ ಮಾಡಿದ್ದರು.

Advertisement

ವಿಡಿಯೋ ರೆಕಾರ್ಡ್ ಮಾಡಿದ್ದ ಪ್ರವಾಸಿಗರು ಅದನ್ನು ಪೊಲೀಸರಿಗೆ ನೀಡಿದ್ದಾರೆ. ನಾಪತ್ತೆ ದೂರು ನೀಡಿದರೂ, ಜಗಳ ವಿಡಿಯೋ ಸಿಕ್ಕಿದರೂ ಗಂಭೀರವಾಗಿ ಪರಿಗಣಿಸದೆ ಪೊಲೀಸರ ನಿರ್ಲಕ್ಷ್ಯ ಎಂದು ಕುಟುಂಬಸ್ಥರು ಆರೋಪಿಸಿದ್ದರು.

ಜ 22 ರಂದು ಸಂಜೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು. ಶವ ಪತ್ತೆಯಾಗುತ್ತಿದ್ದಂತೆ ನಿತೀಶ್ ಗ್ರಾಮದಿಂದ ಪರಾರಿಯಾಗಿದ್ದು ದೀಪಿಕಾ ಪತಿ ಲೋಕೇಶ್ ರವರು ನಿತೀಶ್ ಕೊಲೆಗಾರ ಎಂದು ಆರೋಪ ಮಾಡಿದ್ದರು.ಈ ಬಳಿಕ ಪೊಲೀಸರು ನಿತೀಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

Author Image

Advertisement