'ಮಂತ್ರಿ ಸ್ಥಾನ ನೀಡಬೇಕೆಂದು ನಾನು ಒತ್ತಡ ಹಾಕುತ್ತಿಲ್ಲ'- ಹೆಚ್ಡಿಕೆ
01:21 PM Jun 07, 2024 IST
|
Bcsuddi
Advertisement
ನವದೆಹಲಿ: ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ನಾನು ಒತ್ತಡ ಹಾಕುತ್ತಿಲ್ಲ. ಅವರು ನೀಡಿದರೆ ಜವಾಬ್ದಾರಿ ನಿರ್ವಹಿಸುತ್ತೇನೆ ಅಷ್ಟೇ. ತೀರ್ಮಾನ ಏನಿದ್ದರೂ ಕೂಡ ಅವರದ್ದು ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
Advertisement
ಎನ್ಡಿಎ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನರೇಂದ್ರ ಮೋದಿ ನಾಯಕತ್ವದಲ್ಲಿ ಮತ್ತೆ ಸರ್ಕಾರ ರಚನೆಯಾಗಲಿದೆ. ಸಚಿವ ಸ್ಥಾನದ ಬಗ್ಗೆ ನನಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದರೂ ಸ್ಥಳೀಯ ಪಕ್ಷಗಳಿಗೆ ಸಹ ಖಾತೆ ನೀಡುತ್ತಾರೆ. ನಮ್ಮಿಂದ ಒಳ್ಳೆಯ ಕೆಲಸ ಮಾಡಲು ಸಾಧ್ಯ ಎನ್ನುವುದು ಹೈಕಮಾಂಡ್ಗೆ ತಿಳಿದಿದೆ ಎಂದು ಹೇಳಿದರು.
ನಾಡಿನ ಜನತೆಗೆ, ದೇಶಕ್ಕೆ ಒಳ್ಳೆದಾಗುವ ಖಾತೆ ಸಿಕ್ಕಿದರೆ ಉತ್ತಮವಾಗಿ ಕೆಲಸ ಮಾಡಬಹುದು. ಡಾ. ಮಂಜುನಾಥ್ಗೆ ಖಾತೆ ನೀಡುವ ಬಗ್ಗೆ ಅವರೇ ತೀರ್ಮಾನ ಮಾಡುತ್ತಾರೆ ಎಂದರು.
Next Article