ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಠದ ಹಣಕಾಸು ದುರುಪಯೋಗ ಪ್ರಕರಣ: ಎಸ್.ಕೆ. ಬಸವರಾಜನ್ ಆರೋಪದಿಂದ ಮುಕ್ತ.!

08:26 AM Jul 25, 2024 IST | Bcsuddi
Advertisement

 

Advertisement

 

ಚಿತ್ರದುರ್ಗ : ಚಿತ್ರದುರ್ಗ ಮುರುಘರಾಜೇಂದ್ರ ಮಠದ ಹಣಕಾಸು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪದಿಂದ ಮಾಜಿ ಶಾಸಕರಾಗಿರುವ ಬಸವರಾಜನ್ ಅವರು ಮುಕ್ತರಾಗಿದ್ದಾರೆ..!

ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ನಿನ್ನೆ ಎಸ್. ಕೆ.ಬಸವರಾಜನ್ ಅವರನ್ನು ವಂಚನೆ ಆರೋಪದಿಂದ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

ಮುರಘಾ ಮಠದ ಎಸ್.ಜೆಎಂ ಕೋ-ಆಪರೇಟಿವ್ ಸುಸೈಟಿ ಹಣದಿಂದ ಆಸ್ತಿ ಖರೀದಿ ಮಾಡಿದ್ದಾರೆ ಎಂದು ಆರೋಪಿ ಬಸವರಾಜನ್​ ವಿರುದ್ಧ ದೂರು ನೀಡಲಾಗಿತ್ತು. ಮಠದ ಪರವಾಗಿ ವಿಜಯಕುಮಾರ್ ಎನ್ನುವರು 2013ರ ಆಗಷ್ಟ್ 16ರಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಈ ಪ್ರಕರಣವನ್ನು ಕೋರ್ಟ್​ ವಜಾ ಮಾಡಿದೆ.

Tags :
ಮಠದ ಹಣಕಾಸು ದುರುಪಯೋಗ ಪ್ರಕರಣ: ಎಸ್.ಕೆ. ಬಸವರಾಜನ್ ಆರೋಪದಿಂದ ಮುಕ್ತ.!
Advertisement
Next Article