ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮತಿಭ್ರಾಂತಿಯಿಂದ ಜಮೀರ್ ಮಾತನಾಡಿದ್ದಾರೆ – ನಳಿನ್ ಕುಮಾರ್ ಕಟೀಲ್

03:38 PM Nov 18, 2023 IST | Bcsuddi
Advertisement

ಮಂಗಳೂರು : ಸ್ಪೀಕರ ಸ್ಥಾನಕ್ಕೆ ಸಂಬಂಧಿಸಿದಂತೆ ವಿವಾದಿತ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ ನೀಡಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ಜಮೀರ್ ಅವರು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದಾರೆ. ಸ್ಪೀಕರ್ ಸ್ಥಾನ ಜಾತಿ, ಧರ್ಮದ ಹೊರತಾಗಿ ಇರುವ ಹುದ್ದೆಯಾಗಿದೆ. ಆ ಸ್ಥಾನವನ್ನು ಅವರು ಮತೀಯ ದೃಷ್ಟಿಯಿಂದ ನೋಡಿದ್ದಾರೆ. ಸ್ಥಾನದ ಗೌರವ ಕಡಿಮೆಯಾಗುವಂತೆ ಮಾತನಾಡಿದ್ದಾರೆ ಎಂದರು. ಈ ಹೇಳಿಕೆಯು ಅವರ ಮಾನಸಿಕತೆಯನ್ನು ತೋರಿಸುತ್ತದೆ. ಮತಿಭ್ರಾಂತಿಯಿಂದ ಜಮೀರ್ ಮಾತನಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರಿಂದ ರಾಜೀನಾಮೆ ಪಡೆಯಲಿ’ ಎಂದು ಆಗ್ರಹಿಸಿದರು.

Advertisement
Next Article