ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮತ್ಸ್ಯವಾಹಿನಿ’ ಇ-ತ್ರಿಚಕ್ರ ವಾಹನ ಪರವಾನಿಗೆಗಾಗಿ ಅರ್ಜಿ ಆಹ್ವಾನ

05:32 PM Oct 24, 2024 IST | BC Suddi
Advertisement

 

Advertisement

ಚಿತ್ರದುರ್ಗ : ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸ್ಥಳೀಯವಾಗಿ ಮೀನು ಸೇವೆ ಪ್ರೋತ್ಸಾಹಿಸಲು ಪರಿಸರ ಸ್ನೇಹಿ ಸುಸಜ್ಜಿತ ಕಿಯೋಸ್ಕ್ ಮಾದರಿ ಇ-ತ್ರಿಚಕ್ರ ವಾಹನಗಳಲ್ಲಿ ತಾಜಾ ಮೀನು ಉತ್ಪನ್ನ ಮಾರಾಟಕ್ಕಾಗಿ ಸಾರ್ವಜನಿಕ ಸಹಭಾಗಿತ್ವದ ಮೂಲಕ, ಇ-ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಮೀನುಗಾರಿಕೆಯಲ್ಲಿ ತೊಡಗಿರುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ನ.04 ಅರ್ಜಿ ಸಲ್ಲಿಸಲು ಕೊನೆಯ ದಿನ.

ಚಿತ್ರದುರ್ಗ ಜಿಲ್ಲೆಗೆ 3 ಭೌತಿಕ ಗುರಿ ನಿಗದಿಪಡಿಸಲಾಗಿದ್ದು, ಸಾಮಾನ್ಯ ವರ್ಗದವರಿಗೆ ಭದ್ರತಾ ಠೇವಣಿ ಮೊತ್ತ ರೂ.1 ಲಕ್ಷ, ಪರಿಶಿಷ್ಟ ಜಾತಿ, ಪಂಗಡ ಮಹಿಳೆಯರಿಗೆ ರೂ.0.50 ಲಕ್ಷ ನಿಗದಿಪಡಿಸಲಾಗಿದೆ. ಪರವಾನಗಿದಾರರು ಮಾಹೆಯಾನ ರೂ.3000/ ಮಾಸಿಕ ಶುಲ್ಕ ಭರಿಸಬೇಕಾಗುತ್ತದೆ.

ಆಸಕ್ತರು ನವೆಂಬರ್ 4ರ ಒಳಗಾಗಿ ಅರ್ಜಿ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ, ಹೊಸದುರ್ಗ, ಹಿರಿಯೂರು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ  ಉನಿರ್ದೇಶಕರು ತಿಳಿಸಿದ್ದಾರೆ.

Tags :
ಮತ್ಸ್ಯವಾಹಿನಿ’ ಇ-ತ್ರಿಚಕ್ರ ವಾಹನ ಪರವಾನಿಗೆಗಾಗಿ ಅರ್ಜಿ ಆಹ್ವಾನ
Advertisement
Next Article