ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮರ್ಮಾಂಗಕ್ಕೆ ಹೊಡೆತ- ಅತ್ಯಂತ ಕ್ರೂರವಾಗಿ ರೇಣುಕಾಸ್ವಾಮಿ ಕೊಲೆ

02:45 PM Jun 11, 2024 IST | Bcsuddi
Advertisement

ಬೆಂಗಳೂರು : ಅಭಿಮಾನಿ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಪೊಲೀಸರು ಇಂಚಿಂಚು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಪೊಲೀಸರ ತನಿಖೆಯಲ್ಲಿ ಸ್ಫೋಟಕ ಅಂಶಗಳು ಬಯಲಾಗುತ್ತಿವೆ. ಕೊಲೆ ಪ್ರಕರಣದಲ್ಲಿ ರೇಣುಕಾಸ್ವಾಮಿ ಎಂಬ ಯುವಕನನ್ನು ಅತ್ಯಂತ ಅಮಾನವೀಯವಾಗಿ ಹೊಡೆದು ಕೊಂದಿರುವುದು ಬೆಳಕಿಗೆ ಬಂದಿದೆ.

Advertisement

ರಾಕ್ಷಸರ ರೀತಿ ಯುವಕನ ಕೊಲೆ ಮಾಡಿ ಬಿಸಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಲೆಯಾದ ರೇಣುಕಾಸ್ವಾಮಿ ಮುಖದ ಮೂಳೆ ಮುರಿಯಲಾಗಿದೆ. ಮೂಗು ಓಪನ್ ಆಗುವಂತೆ ಗುದ್ದಿದ್ದಾರೆ. ಕಾಲಿನಿಂದ ಮರ್ಮಾಂಗಕ್ಕೆ ಒದೆಯಲಾಗಿದೆ. ಎಡಭಾಗದ ಪಕ್ಕೆಲುಬು ಕಟ್ ಆಗುವಂತೆ ಹಲ್ಲೆ ಮಾಡಲಾಗಿದೆ. ರೇಣುಕಾಸ್ವಾಮಿ ಕಾಲು ಮತ್ತು ಕೈಗೆ ಬ್ಯಾಟ್, ದೊಣ್ಣೆಯಿಂದ ಹಲ್ಲೆ ಮಾಡಲಾಗಿದೆ. ಮೃತ ವ್ಯಕ್ತಿಯ ಕಿವಿಗೆ ಹಾಗೂ ತಲೆಗೆ ಗಂಭೀರ ಗಾಯ ಆಗಿದೆ ಎನ್ನಲಾಗಿದೆ.

ಸದ್ಯ ರೇಣುಕಾಸ್ವಾಮಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಪೋಸ್ಟ್ ಮಾರ್ಟಂ ವರದಿ ಬಳಿಕ ಕೊಲೆ ಮಾಡಿರುವ ಮತ್ತಷ್ಟು ಮಾಹಿತಿ ಹೊರಬೀಳಲಿದೆ. ಸದ್ಯ ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Advertisement
Next Article