ಮಳೆಯ ಆರ್ಭಟ ರಾಜ್ಯದ ಈ ಜಿಲ್ಲೆಗೆ ರೆಡ್ ಅಲರ್ಟ್!
04:41 PM Jul 30, 2024 IST | BC Suddi
Advertisement
ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆ ಆಗುತ್ತಿದ್ದು, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕೆಲವೆಡೆ ಗುಡ್ಡ ಕುಸಿತ ಆಗಿ, ಅವಘಡಗಳು ಸಂಭವಿಸುತ್ತಿವೆ.
ಈ ಹಿನ್ನಲೆ ಎಚ್ಚೆತ್ತ ಕೊಡಗು ಜಿಲ್ಲಾಡಳಿತ ಮುಂದಿನ ಎರಡು ದಿನಗಳ ಕಾಲ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಗುಡ್ಡ, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ.
Advertisement
ಕಳೆದೆರಡು ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಗುಡ್ಡ ಕುಸಿದು ದೊಡ್ಡ ಅನಾಹುತವೊಂದು ಸೃಷ್ಟಿಯಾಗಿತ್ತು. ಇದರಿಂದ ಕೊಡಗು ಜಿಲ್ಲೆಯ ಜನ ಆತಂಕದಲ್ಲಿದ್ದಾರೆ.