ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು..!

11:21 AM Apr 15, 2024 IST | Bcsuddi
Advertisement

ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ರಾಷ್ಟ್ರಪತಿ ಚೌಕ್ ಬಳಿ ಈ ಘಟನೆ ನಡೆದಿದೆ ಮೃತಪಟ್ಟ ಯುವಕ ಕಲಬುರಗಿಯ ಅಶೋಕ್ ನಗರ ಬಡಾವಣೆ ನಿವಾಸಿ ಆಕಾಶ್(21) ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿ ಮತ್ತೋರ್ವ ಯುವಕನು ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕರ ಮಧ್ಯೆ ವೈಷಮ್ಯ ಅಥವಾ ಹುಡುಗಿ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಆದರೆ ಕೊಲೆಗೆ ನಿಖರ ಕಾರಣ ಏನೆಂದು ಇನ್ನು ತಿಳಿದು ಬಂದಿಲ್ಲ. ಕೊಲೆ ಮಾಡಿ ಎಸ್ಕೇಪ್ ಆಗಿರುವ ದುಷ್ಕರ್ಮಿಗಳು ಯಾರೆಂದು ಪತ್ತೆ ಹಚ್ಚಬೇಕಾಗಿದೆ. ಹೀಗಾಗಿ ಪೊಲೀಸರ ತನಿಖೆ ನಂತರವೇ ಎಲ್ಲದಕ್ಕೂ ಉತ್ತರ ಸಿಗಲಿದೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement

Advertisement
Next Article