ಮುಂದಿನ 4 ದಿನ 17 ಜಿಲ್ಲೆಯಲ್ಲಿ ಭರ್ಜರಿ ಮಳೆ
10:28 AM Jun 06, 2024 IST | Bcsuddi
Advertisement
ಬೆಂಗಳೂರು : ಮುಂದಿನ 4 ದಿನ 17 ಜಿಲ್ಲೆಗಳಿಗೆ ಭರ್ಜರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಕೂಡ ಮಳೆ ಸಾಧ್ಯತೆಯಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು,ಇಂದು ಕೂಡ ಮಳೆರಾಯ ಆರ್ಭಟ ನಡೆಸಲಿದ್ದಾನೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು,ಹಾಸನ,ಮಂಡ್ಯ, ರಾಮನಗರ, ಶಿವಮೊಗ್ಗ,ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.ಇನ್ನೂ ಗುಡುಗು ಮಿಂಚು , ಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.