ಮುಡಾ ಕೇಸ್: ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲು ಸಿಎಂ ಪರ ವಕೀಲರ ನಿರ್ಧಾರ
01:09 PM Sep 24, 2024 IST
|
BC Suddi
Advertisement
ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ನಲ್ಲೂ ಹಿನ್ನಡೆ ಆಗಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪರ ವಕೀಲರಾದ ಸುಪ್ರೀಂಕೋರ್ಟ್ನ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಹಾಗೂ ಪ್ರೊ.ರವಿಕುಮಾರ್ ವರ್ಮಾ ಅವರು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಹೈಕೋರ್ಟ್ನ ತೀರ್ಪಿನ ಪ್ರತಿಯನ್ನು ಪಡೆಯಲಿರುವ ಸಿಎಂ ಪರ ವಕೀಲರು ನಾಳೆಯೇ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
Advertisement
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Next Article