ಮುಡಾ ಸಂಕಷ್ಟದ ಬೆನ್ನಲ್ಲೇ ಸಿಎಂ ಇಂದು ಬೆಳಗಾವಿಗೆ ಭೇಟಿ
11:08 AM Oct 13, 2024 IST
|
BC Suddi
Advertisement
ಬೆಳಗಾವಿ: ಮುಡಾ ಸಂಕಷ್ಟದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ಉತ್ತರ ಕರ್ನಾಟಕದ ಆದಿಶಕ್ತಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆಯಲಿದ್ದಾರೆ. ಸಂಕಷ್ಟದಿಂದ ಪಾರಾಗಲು ಆದಿಶಕ್ತಿಯ ಮೊರೆ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಸಿಎಂ ಪರ ವಿರೋಧ ಚರ್ಚೆಯಾಗುತ್ತಿದ್ದು, ಸಿಎಂ ಪದವಿ ವಿಚಾರವಾಗಿ ಸತೀಶ್ ಜಾರಕಿಹೊಳಿ ಹೆಸರು ಮುನ್ನೆಲೆಗೆ ಬಂದ ಕಾರಣ ಸಿದ್ದರಾಮಯ್ಯರ ಬೆಳಗಾವಿ ಪ್ರವಾಸ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
Advertisement
Next Article