ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮುಡಾ ಹಗರಣದ ಜಟಾಪಟಿ ನಡುವೆ ರಾಜ್ಯಪಾಲರ ಭೇಟಿಯಾದ ಸಿಎಂ ಸಿದ್ದರಾಮಯ್ಯ

04:05 PM Oct 09, 2024 IST | BC Suddi
Advertisement

ಬೆಂಗಳೂರು :ಮುಡಾಹಗರಣಕ್ಕೆ  ಸಂಬಂಧಿಸಿದಂತೆ  ಹಲವು ಜಟಾಪಟಿಗಳು ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಪರ ನಡುವೆ ನಡೆದಿತ್ತು. ಇದರ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರನ್ನು ಭೇಟಿ ನೀಡಿದ್ದಾರೆ.

Advertisement

ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಹೀಗಾಗಿ ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನಕ್ಕೆ ತೆರಳಿದ್ದ ಸಿದ್ದರಾಮಯ್ಯ ಈ ವೇಳೆ ಭೇಟಿ ಮಾಡಿ ನಗುಮುಖದಿಂದಲೇ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ.

ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಇತ್ತೀಚೆಗೆ ಅನುಮತಿ ನೀಡಿದ್ದರು. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚನಕ್ಕೆ ಕಾರಣವಾಗಿತ್ತು. ಕಾಂಗ್ರೆಸ್​ ನಾಯಕರು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದರು

 

Advertisement
Next Article