ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮುಡಾ ಹಗರಣ - ಕಾಂಗ್ರೆಸ್​ ನಾಯಕರಿಂದ ರಾಜಭವನ ಚಲೋ

12:28 PM Aug 31, 2024 IST | BC Suddi
Advertisement

ಬೆಂಗಳೂರು :ಮುಡಾ ಹಗರಣ ವಿಚಾರವಾಗಿ ಇಂದು ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸುತ್ತಿದ್ದಾರೆ. ಅನೇಕ ಕಾಂಗ್ರೆಸ್ ನಾಯಕರು ಇದರಲ್ಲಿ ಪಾಲ್ಗೊಂಡಿದ್ದಾರೆ.

Advertisement

ಮುಡಾ ಹಗರಣ ಸಿಎಂ ಸಿದ್ದರಾಮಯ್ಯರವರಿಗೆ ಕಂಟಕವಾಗಿ ಪರಿಣಮಿಸಿದೆ.ಈ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಅನೇಕ ಚರ್ಚೆಗಳು ಮುಂದುವರಿಯುತ್ತಲೇ ಇದೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗಾಗಿ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್​ ನಾಯಕರು ಇಂದು ರಾಜಭವನ ಚಲೋ ಕಾರ್ಯಕ್ರಮಕ್ಕೆ ಕರೆ ನೀಡಿದ್ದಾರೆ.

ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಮುರಗೇಶ್​ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್​ ನಾಯಕರು ಇಂದು ರಾಜಭವನ ಚಲೋ ಗೆ ಕರೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜಭವನ ಚಲೋ ನಡೆಯುತ್ತಿದೆ.

bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Next Article