ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಸಾಧ್ಯತೆ..!
09:49 AM Sep 27, 2024 IST
|
BC Suddi
Advertisement
ಬೆಂಗಳೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ದಿನ ದಿನಕ್ಕೂ ಆತಂಕ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ.
Advertisement
ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಲೋಕಾಯುಕ್ತ ಮೈಸೂರು ಎಸ್ಪಿ ಉದೇಶ್ ಅವ್ರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.
ಇಂದು ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ. ಎಫ್ಐಆರ್ನಲ್ಲಿ ಸಿಎಂ ಸಿದ್ದರಾಮಯ್ಯ A1 ಆಗುವ ಸಾಧ್ಯತೆ ಇದೆ.
Next Article