ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮುಸ್ಲಿಂ ಯುವಕನಿಂದ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯ ಅಪಹರಣ...!!

11:15 AM Apr 24, 2024 IST | Bcsuddi
Advertisement
ಧಾರವಾಡ : ಅತಿಥಿ ಶಿಕ್ಷಕಿಯ ತಂದೆಯೊಬ್ಬರು ತಮ್ಮ ಮಗಳ ಅಪಹರಣವಾಗಿದೆ ಎಂದು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಗೇರಿ  ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವುದು ವರದಿಯಾಗಿದೆ.
ಕಳಸ ಗ್ರಾಮದ ಅಕ್ಷತಾ ಕಳಸೂರು ಅಪಹರಣಕ್ಕೊಳಗಾದ ಅತಿಥಿ ಶಿಕ್ಷಕಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಸುಬಾನಿ ಮಾಬುಸಾಬ್ ದೊಡ್ಡಮನಿ ಎಂಬಾತ ಏಪ್ರಿಲ್ 18 ರಂದು ಯುವತಿಯನ್ನು ಯಾವುದೋ ದುರುದ್ದೇಶದಿಂದ ಅಪಹರಿಸಿದ್ದಾನೆಂದು ಅಕ್ಷತಾ ತಂದೆ ಆರೋಪಿಸಿದ್ದಾರೆ.
ನಾಲ್ಕೈದು ವರ್ಷಗಳಿಂದ ಈ ಸುಬಾನಿ ಮಾಬುಸಾಬ್ ಯುವತಿಯನ್ನು ಹಿಂಬಾಲಿಸುವುದು, ಪೀಡಿಸುವುದು, ದಾರಿಯಲ್ಲಿ ಬರುವಾಗ ಅಡ್ಡಗಟ್ಟುವುದು ಮಾಡುತ್ತಿದ್ದ.
ಈ ಬಗ್ಗೆ ಅಕ್ಷತಾ ತನ್ನ ತಂದೆ ಬಳಿ ಹೇಳಿಕೊಂಡಿದ್ದಳು ಎನ್ನಲಾಗಿದೆ. ಹೀಗಾಗಿ ಸುಬಾನಿ ಮಾಬುಸಾಬ್ ಮತ್ತು ಕುಟುಂಬಸ್ಥರನ್ನು ಕರೆಸಿ ಬುದ್ಧಿವಾದ ಹೇಳಿ, ಮತ್ತೆ ಮಗಳಿಗೆ ತೊಂದರೆ ಕೊಡದಂತೆ ಎಚ್ಚರಿಕೆ ಕೊಟ್ಟಿದ್ದರು. ಆ ನಂತರವೂ ಈತನ ಕಾಟ ಮುಂದುವರಿದಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಳಸ ಗ್ರಾಮದ ಅಖಂಡೇಶ್ವರ ಜಾತ್ರೆಗೆ ಹೋಗಿ ಬರುವುದಾಗಿ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಹೋದವಳು ನಾಪತ್ತೆಯಾಗಿದ್ದಾಳೆ. ಅಕ್ಷತಾಳನ್ನು ಸುಬಾನಿ ಮಾಬುಸಾಬ್ ದೊಡ್ಡಮನಿ ಅಪಹರಿಸಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Advertisement
Advertisement
Next Article