For the best experience, open
https://m.bcsuddi.com
on your mobile browser.
Advertisement

ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ

11:31 AM Jan 01, 2024 IST | Bcsuddi
ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ
Advertisement

ಚಿಕ್ಕಮಗಳೂರು: ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಡೂರು ಮೂಲದ ಮೃತ ನಿಂಗನಾಯಕ್ ಅವರು ಕಳೆದ ಎರಡು ವರ್ಷಗಳಿಂದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗಿತ್ತು ಹಾಗೂ ಡಿ ದರ್ಜೆ ನೌಕರರು ಕಡಿಮೆ ಇದ್ದಾರೆ. ಎಲ್ಲಾ ಕೆಲಸ ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮನೆಯಲ್ಲಿ ನಿದ್ದೆ ಬರುತ್ತಿರಲಿಲ್ಲ ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ.

ಕಳೆದ ಒಂದು ವಾರದ ಹಿಂದೆಯಷ್ಟೇ ಬಿಇಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದು ಸುದ್ದಿಯಲ್ಲಿತ್ತು. ಇಲ್ಲಿನ BEO ಹೇಮಂತ್ ರಾಜ್ ಸಿಕ್ಕಿಬಿದ್ದಿದ್ದರು.

Advertisement

ಅನುಕಂಪದ ಆಧಾರದ ಮೇಲೆ ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ಬಿಇಒ ಹೇಮಂತ್ ರಾಜ್ ದ್ವಿತೀಯ ದರ್ಜೆ ಸಹಾಯಕರೊಬ್ಬರ ಮೂಲಕ ಬಿಇಒ 15 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು ಇದರಿಂದ ನೊಂದ ಚಿಕ್ಕಮಗಳೂರು ನಗರದ ಮಹಿಳೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು

ಈ ಘಟನೆ ನಡೆದ ವಾರಕ್ಕೆ ನಿಂಗರಾಜ್ ಆತ್ಯಹತ್ಯೆಗೆ ಶರಣಾಗಿದ್ದಾರೆ. ಸದ್ಯ ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author Image

Advertisement