ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೂಲ ಕಾಂಗ್ರೆಸ್ಸಿಗರು, ಯೋಗೇಶ್ವರ್ ಬೆಂಬಲಿಗರ ಜೊತೆ ಡಿಕೆ ಸುರೇಶ್ ಸಮನ್ವಯ ಸಭೆ

11:58 AM Oct 26, 2024 IST | BC Suddi
Advertisement

ಚನ್ನಪಟ್ಟಣ  :ಮಾಜಿ ಸಂಸದ ಡಿಕೆ ಸುರೇಶ್ ಅವರು ಕ್ಷೇತ್ರದಲ್ಲಿನ ಮೂಲ ಕಾಂಗ್ರೆಸ್‌ಗರು ಹಾಗೂ ಯೋಗೇಶ್ವರ್ ಬೆಂಬಲಿಗರ ಜೊತೆ ಇಂದು ಅಂದರೆ ಶನಿವಾರ ಸಮನ್ವಯ ಸಭೆ ನಡೆಸಲಿದ್ದಾರೆ.

Advertisement

ಚನ್ನಪಟ್ಟಣ ಟಿಕೆಟ್ ಕೈತಪ್ಪುವುದು ಖಚಿತವಾದ ಬೆನ್ನಲ್ಲೇ ಬಿಜೆಪಿಗೆ ರಾಜೀನಾಮೆ ನೀಡಿದ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಕ್ಷ​ ಸೇರ್ಪಡೆಗೊಂಡರು. ಸೇರ್ಪಡೆ ನಂತರ ಪಕ್ಷದ ಅಭ್ಯರ್ಥಿ ಕೂಡ ಆಗಿದ್ದಾರೆ. ಇದರಿಂದ ಕ್ಷೇತ್ರದಲ್ಲಿನ ಮೂಲ ಕಾಂಗ್ರೆಸ್ಸಿಗರ ನಡುವೆ ಅಸಮಧಾನ ಉಂಟಾಗಿದೆ ಎಂದು ಹೇಳಲಾಗಿದೆ. ಈ ಕಾರಣದಿಂದ ಇಂದು ಸಭೆ ಕರೆಯಲಾಗಿದೆ ಎಂಬುವುದಾಗಿ ಹೇಳಲಾಗುತ್ತಿದೆ.

ಈವರೆಗೂ ಸಿಪಿವೈ ಬಿಜೆಪಿಯಲ್ಲಿದ್ದು ಚುನಾವಣೆ ಎದುರಿಸಿರುವುದರಿಂದ ಅವರ ಬೆಂಬಲಿಗರೂ ಹಾಗೂ ಕಾಂಗ್ರೆಸ್ಸಿಗರ ನಡುವೆ ವೈರತ್ವ ಇದ್ದೇ ಇರುತ್ತದೆ. ಈಗ ಸೈನಿಕ ಕಾಂಗ್ರೆಸ್ ಸೇರಿದ ಬಳಿಕ ಬೆಂಬಲಿಗರು ಕಾರ್ಯಕರ್ತರ ನಡುವೆ ಗೊಂದಲ ಅಸಮಾಧಾನ ಬುಗಿಲೆದ್ದಿದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆ ಇಂದು ಡಿ.ಕೆ.ಸುರೇಶ್ ನೇತೃತ್ವದಲ್ಲಿ ಸಮನ್ವಯ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಮೂಲ ಕಾಂಗ್ರೆಸ್ಸಿಗರು ಹಾಗೂ ಯೋಗೇಶ್ವರ್ ಬೆಂಬಲಿಗರು ಭಾಗಿಯಾಗಲಿದ್ದಾರೆ. ಹೊಂಗನೂರು - ಮಳೂರು - ಬೇವೂರು ಜಿ.ಪಂ ವ್ಯಾಪ್ತಿಯಲ್ಲಿ ಸಭೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಸಭೆಯಲ್ಲಿ ಡಿ.ಕೆ.ಸುರೇಶ್ ಹಾಗೂ ಸಿ.ಪಿ.ಯೋಗೇಶ್ವರ್ ಭಾಗಿಯಾಗಲಿದ್ದಾರೆ.

 

Advertisement
Next Article