For the best experience, open
https://m.bcsuddi.com
on your mobile browser.
Advertisement

ಮೇಲ್ಮನೆ ಕೈ ಅಭ್ಯರ್ಥಿ ಪಟ್ಟಿ ಇನ್ನೆರಡು ದಿನದಲ್ಲಿ ಅಂತಿಮ

12:29 PM May 27, 2024 IST | Bcsuddi
ಮೇಲ್ಮನೆ ಕೈ ಅಭ್ಯರ್ಥಿ ಪಟ್ಟಿ ಇನ್ನೆರಡು ದಿನದಲ್ಲಿ ಅಂತಿಮ
Advertisement

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ನಾಳೆ ದೆಹಲಿಗೆ ಪ್ರಯಾಣ ಬೆಳಸಲಿದ್ದು, ಹೈಕಮಾಂಡ್‌ ಭೇಟಿಯಾಗಲಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿರುವ ಸಿಎಂ, ಡಿಸಿಎಂ ಹೈಕಮಾಂಡ್‌ ಭೇಟಿಯಾಗಿ ವಿಧಾನಪರಿಷತ್‌ ಚುನಾವಣೆ ಕುರಿತು ಚರ್ಚೆ ನಡೆಸಲಿದ್ದಾರೆ.

ಏಳು ಪರಿಷತ್‌ ಸ್ಥಾನಗಳಿಗೆ 70 ಆಕಾಂಕ್ಷಿಗಳಿದ್ದು, ಇದುವರೆಗೆ ಯಾವುದೇ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಲ್ಲ. ಹೀಗಾಗಿ ಆಕಾಂಕ್ಷಿಗಳ ಪಟ್ಟಿಯನ್ನು ಹೊತ್ತು ಬಗ್ಗೆ ಚರ್ಚೆ ನಡೆಸಲು ಹೈಕಮಾಂಡ್ ಜತೆ ಚರ್ಚಿಸಿ ಕಣಕ್ಕೆ ಇಳಿಸಬೇಕಾದ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಾಗಿದೆ. ಸಮುದಾಯ ಹಿರಿತನ, ಹಿಂದಿನ ಚುನಾವಣೆಯಲ್ಲಿ ಪಕ್ಷದ ಚುನಾವಣೆಗೆ ದುಡಿದ ಮುಂಚೂಣಿ ನಾಯಕ ಸಹಿತ ಹಲವು ಲೆಕ್ಕಾಚಾರಗಳ ಆಧಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ

Advertisement

Author Image

Advertisement