For the best experience, open
https://m.bcsuddi.com
on your mobile browser.
Advertisement

ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ನಾಮಪತ್ರ ಸಲ್ಲಿಸಿದರು

06:31 PM Apr 03, 2024 IST | Bcsuddi
ಮೈಸೂರು   ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ನಾಮಪತ್ರ ಸಲ್ಲಿಸಿದರು
Advertisement

ಮೈಸೂರು: ಮೈಸೂರಿನಲ್ಲಿ ಇಂದು ಬೃಹತ್ ರೋಡ್ ಶೋ ಮೂಲಕ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನಾಮಪತ್ರ ಸಲ್ಲಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ,ವಿಜಯೇಂದ್ರ ಅವರು ಭಾಗವಹಿಸಿ ಕಾರ್ಯಕರ್ತರಿಗೆ ಹುರುಪು ತುಂಬಿಸಿದರು. ನಾಡಿಗೆ ಅಗ್ರಮಾನ್ಯ ಕೊಡುಗೆ ನೀಡಿರುವ ಶ್ರೇಷ್ಠ ಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೆಲ್ಲಿಸಿ ಮತ್ತೊಮ್ಮೆ ಮೋದಿ ಮಹಾ ಸಂಕಲ್ಪ ಸಾಕಾರಕ್ಕಾಗಿ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಉತ್ಸಾಹವು ಇಲ್ಲಿ ಐತಿಹಾಸಿಕ ಗೆಲುವಿನ ಮುನ್ಸೂಚನೆ ನೀಡುವಂತಿತ್ತು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ರಾಜಮಾತೆ ಶ್ರೀಮತಿ ಪ್ರಮೋದಾದೇವಿ ಒಡೆಯರ್, ಸಂಸದ ಪ್ರತಾಪಸಿಂಹ, ಮಾಜಿ ಸಂಸದ ವಿಜಯ್ ಶಂಕರ್, ಶಾಸಕರಾದ ಟಿ.ಎಂ.ಶ್ರೀವತ್ಸ, ಜಿ.ಟಿ ಹರೀಶ್ ಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೇರಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅತ್ಯುತ್ಸಾಹದಿಂದ ಭಾಗವಹಿಸಿದ್ದರು.

Advertisement

Author Image

Advertisement