ಮೊದಲು ನಿಮ್ಮ ಸ್ಥಾನವನ್ನು ಭದ್ರವಾಗಿಸಿಕೊಳ್ಳಿ: ಸಿಎಂ ಹೇಳಿಕೆಗೆ ಯತ್ನಾಳ್ ತೀರುಗೇಟು
11:30 AM Dec 12, 2023 IST | Bcsuddi
Advertisement
ಬೆಳಗಾವಿ: ಮಾನ್ಯ ಸಿದ್ದರಾಮಯ್ಯನವರೇ ನಮ್ಮನ್ನು ವಿಚಾರಿಸೋ ಭರದಲ್ಲಿ ನಿಮ್ಮ ಕಾಳಜಿ ಮರೀಬೇಡಿ ಮೊದಲು ನಿಮ್ಮ ಸ್ಥಾನವನ್ನು ಭದ್ರವಾಗಿಸಿಕೊಳ್ಳಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯನವರ ಟ್ವೀಟ್ ಗೆ ಕಿಡಿಕಾರಿದ್ದಾರೆ.
ಪ್ರತಿದಿನ ಅವರದ್ದೇ ಪಕ್ಷದ ಶಾಸಕರು ಒಬ್ಬೊಬ್ಬರಾಗಿ ಅಶೋಕ್ ಅವರ ಮುಖಕ್ಕೆ ಮಂಗಳಾರತಿ ಎತ್ತುತ್ತಿದ್ದಾರೆ. ಯಾವ ಕುರ್ಚಿಯೂ ಸಿಕ್ಕಿಲ್ಲ ಎಂಬ ವೇದನೆಯಿಂದ ಕುದಿಯುತ್ತಿರುವ ಶಾಸಕರಿಗೆ ಬೀದಿ ಬೀದಿಯಲ್ಲಿ ಛೀಮಾರಿ ಹಾಕುತ್ತಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆ ಯತ್ನಾಳ್ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.
ಇನ್ನು ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ನಡುವೆಯೆ ಜಗಳ ತಂದಿಡುವ ಕೆಲಸವನ್ನು ಮೊದಲು ನಿಲ್ಲಿಸಿ. ಈಗಾಗಲೇ ಮೂಲ ಕಾಂಗ್ರೆಸ್ಸಿಗರೇ ನಿಮ್ಮನ್ನು ಪಕ್ಷದಿಂದ ಹೊರದಬ್ಬುವ ಸಂಚು ರೂಪಿಸುತ್ತಿರುವಂತೆ ಇದೆ ನೋಡಿಕೊಳ್ಳಿ ಎಂದರು.
Advertisement