ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಮೋದಿಯನ್ನು ವಿರೋಧ ಮಾಡುವುದರಿಂದ ಯಾವುದೇ ಫಲ ಸಿಗುವುದಿಲ್ಲ' - ಯಡಿಯೂರಪ್ಪ

02:13 PM Jan 28, 2024 IST | Bcsuddi
Advertisement

ಶಿವಮೊಗ್ಗ: ಪ್ರಧಾನಿ ಮೋದಿಯವರನ್ನು ವಿರೋಧ ಮಾಡುವುದರಿಂದ ಯಾವುದೇ ಫಲ ಸಿಗುವುದಿಲ್ಲ. ಎಲ್ಲರೂ ಆಶೀರ್ವಾದ ಮಾಡುವಂತಹ ಸಂದರ್ಭವಿದು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

Advertisement

ಈ ಕುರಿತು ಮಾತನಾಡಿದ ಅವರು, ಬಿಜೆಪಿಗೆ ಸಾಕಷ್ಟು ಜನ ಮತ್ತೆ ವಾಪಸ್ಸು ಬರುತ್ತಿದ್ದಾರೆ. ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಬಿಟ್ಟು ಹೋದವರು ಮತ್ತೆ ಬರುತ್ತಾರೆ. ಬಿಜೆಪಿಗೆ ಹೊಸಬರು ಕೂಡ ಬರುತ್ತಿದ್ದಾರೆ ಎಂದರು.

ಇನ್ನು ಲೋಕಸಭಾ ಚುನಾವಣೆ ತಯಾರಿಗೆ ಎಲ್ಲರೂ ಈಗಾಗಲೇ ಪ್ರವಾಸ ಮಾಡುತ್ತಿದ್ದು, ನಾನು ಕೂಡ ಪ್ರವಾಸ ಮಾಡುತ್ತೇನೆ. ವಿಜಯೇಂದ್ರ ರಾಜ್ಯಾಧ್ಯಕ್ಷನಾದ ಮೇಲೆ ಪಕ್ಷದಲ್ಲಿ ಬಹಳ ಉತ್ಸಾಹದ ವಾತಾವರಣ ಬಂದಿದೆ ಎಂದು ಹೇಳಿದ್ದಾರೆ.

Advertisement
Next Article