'ಮೋದಿಯವರ ಭರವಸೆಯನ್ನು ಇಡೀ ಭಾರತವೇ ನಂಬುತ್ತದೆ' - ಅಶ್ವಿನಿ ವೈಷ್ಣವ್
03:24 PM Dec 03, 2023 IST | Bcsuddi
Advertisement
ಮಧ್ಯಪ್ರದೇಶ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ಈವರೆಗಿನ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ ಬಿಜೆಪಿಗೆ ಗೆಲುವಿನತ್ತ ಸಾಗುತ್ತಿದ್ದು, ಪ್ರಧಾನಿ ಮೋದಿ ಅಭಿವೃದ್ಧಿ ಸಂಕಲ್ಪ ಫಲಿಸಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಭರವಸೆಯಲ್ಲಿ ಭಾರತವು ನಂಬುತ್ತದೆ. ಇಡೀ ದೇಶವು ಪ್ರಧಾನಿ ಮೋದಿಯವರ ಭರವಸೆಯಲ್ಲಿ ನಂಬಿಕೆ ಇಟ್ಟಿದೆ ಮತ್ತು ದೇಶವನ್ನು ಅಭಿವೃದ್ಧಿಪಡಿಸುವ ಪ್ರಧಾನಿ ಮೋದಿಯವರ ಸಂಕಲ್ಪವನ್ನು ಬೆಂಬಲಿಸುತ್ತದೆ ಎಂದರು.
ಇನ್ನು ಪ್ರಧಾನಿ ಮೋದಿಯವರ ಸಂಕಲ್ಪವನ್ನು ಬೆಂಬಲಿಸುತ್ತದೆ ಎಂಬುದು ಇಂದಿನ ಫಲಿತಾಂಶಗಳು ಸ್ಪಷ್ಟವಾಗಿ ತೋರಿಸುತ್ತವೆ ಎಂದಿದ್ದಾರೆ.
Advertisement