'ಮೋದಿ ಅಧಿಕಾರಕ್ಕೆ ಬರುವ ಮುನ್ನ ಎಸ್ಟಿ ಪಂಗಡದ ಕಲ್ಯಾಣಕ್ಕೆ ಕಾಂಗ್ರೆಸ್ ಶ್ರಮಿಸಿಲ್ಲ' - ಪ್ರಲ್ಹಾದ್ ಜೋಶಿ
05:18 PM Jan 19, 2024 IST | Bcsuddi
Advertisement
ಬೆಂಗಳೂರು: ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವುದಕ್ಕಿಂತ ಮೊದಲು ಪರಿಶಿಷ್ಟ ಜಾತಿ ಪಂಗಡದ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿರಲ್ಲಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಈ ಕುರಿತು ಬಿಜೆಪಿ ಎಸ್ಟಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಿರ್ಸಾ ಮುಂಡಾ ಯಾರು ಅಂತಾ ಮರೆತೇ ಹೋಗಿತ್ತು. ಅವರನ್ನು ಮರೆತು ಹೋಗುವಂತೆ ಮಾಡಿದ್ದೇ ಕಾಂಗ್ರೆಸ್ ಎಂದರು.
ಇನ್ನು ಎಲ್ಲಾ ಜನರನ್ನ ಗುರುತಿಸಿ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಎಸ್ಟಿ ಪಂಗಡಕ್ಕೆ ಸೇರಿದ ಹಿಂದುಳಿದ ಪ್ರದೇಶದಲ್ಲಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದೇ ಬಿಜೆಪಿ ಎಂದಿದ್ದಾರೆ.
Advertisement