ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ: ಓರ್ವ ನಾವಿಕ ನಾಪತ್ತೆ..!
10:45 AM Jul 23, 2024 IST
|
Bcsuddi
Advertisement
ಮುಂಬೈ: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್ಎಸ್ ಬ್ರಹ್ಮಪುತ್ರದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ. ನೌಕೆಯ ಕಿರಿಯ ನಾವಿಕ ನಾಪತ್ತೆಯಾಗಿ, ನೌಕೆಯು ಒಂದು ಕಡೆ ವಾಲಿರುವ ಘಟನೆ ಮುಂಬೈನ ನೌಕಾಪಡೆಯ ಡಾಕ್ಯಾರ್ಡ್ನಲ್ಲಿ ನಡೆದಿದೆ.
Advertisement
ಅವಘಡದಲ್ಲಿ ಸಾಕಷ್ಟು ಹಾನಿಯುಂಟಾಗಿದ್ದು, ಹಡಗನ್ನು ಸರಿಪಡಿಸುವ ಕಾರ್ಯಾಚರಣೆ ನಡೆಯುತ್ತಿದೆ. ಜೊತೆಗೆ ನಾಪತ್ತೆಯಾಗಿರುವ ಸಿಬ್ಬಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಜುಲೈ 21 ರ ಸಂಜೆ ಐಎನ್ಎಸ್ ಬ್ರಹ್ಮಪುತ್ರ ಯುದ್ಧನೌಕೆಯ ದುರಸ್ತಿ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಇತರ ಹಡಗುಗಳ ಸಿಬ್ಬಂದಿ ನೆರವಿನಿಂದ ನಿನ್ನೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ದುರಂತದಿಂದ ನೌಕೆ ಒಂದು ಕಡೆ ವಾಲಿದ್ದು, ಹಡಗನ್ನು ನೇರವಾಗಿಸಲು ಇನ್ನೂ ಸಾಧ್ಯವಾಗಿಲ್ಲ ಎಂದು ನೌಕಾಪಡೆ ತಿಳಿಸಿದೆ.
Next Article