ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ರಕ್ಷಣೆಗಾಗಿ ಪೊಲೀಸರು ಶಾಮೀಯಾನ ಹಾಕಿಸಿಕೊಂಡಿದ್ದಾರೆ'- ಡಿಕೆ ಶಿವಕುಮಾರ್

01:43 PM Jun 14, 2024 IST | Bcsuddi
Advertisement

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಇರುವ ಠಾಣೆಗೆ ರಕ್ಷಣೆಗಾಗಿ ಪೊಲೀಸರು ಶಾಮೀಯಾನ ಹಾಕಿಸಿಕೊಂಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

Advertisement

ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಬಗ್ಗೆ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪ್ರಕರಣ ಸಂಬಂಧ 13 ಮಂದಿ ಆರೋಪಿಗಳಿದ್ದಾರೆ. ಬೆಳಗ್ಗೆಯಿಂದ ಮಾಧ್ಯಮದವರು ಕ್ಯಾಮೆರಾ ಹಿಡಿದು ಕುಳಿತಿರುತ್ತಾರೆ. ಪೊಲೀಸರಿಗೆ ಯಾವುದೇ ಅಡತಡೆಗಳಿಲ್ಲದೇ ವಿಚಾರಣೆ ಮಾಡಲು ಅವಕಾಶಬೇಕು. ಆ ಹಿತದೃಷ್ಟಿಯಿಂದ ರಕ್ಷಣೆಗಾಗಿ ಪೊಲೀಸರು ಶಾಮೀಯಾನ ಹಾಕಿಸಿಕೊಂಡಿದ್ದಾರೆ ತಿಳಿಸಿದರು.

ದರ್ಶನ್ ಪ್ರಕರಣ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡದ ಆರೋಪದ ಕುರಿತು ಮಾತನಾಡಿದ ಅವರು, ಸರ್ಕಾರದ ಯಾವ ಒತ್ತಡವೂ ಇಲ್ಲ, ಈ ಬಗ್ಗೆ ನಾನು ವಿಚಾರಿಸಿದ್ದೇನೆ. ನಮ್ಮ ಗೃಹ ಸಚಿವರಾದ ಜಿ. ಪರಮೇಶ್ವರ್ ಅವರು ಇದರಲ್ಲಿ ಇನ್ವಾಲ್ ಆಗಿಲ್ಲ. ಯಾರೂ ಕೂಡ ಈ ಕೇಸ್‌ನಲ್ಲಿ ಹಸ್ತಕ್ಷೇಪ ಮಾಡ್ತಿಲ್ಲ. ಈ ಪ್ರಕರಣದ ಬಗ್ಗೆ ನಾವು ಪ್ರತಿಕ್ರಿಯೆ ಕೂಡ ಮಾಡುತ್ತಿಲ್ಲ ಎಂದು ಹೇಳಿದರು.

 

Advertisement
Next Article