For the best experience, open
https://m.bcsuddi.com
on your mobile browser.
Advertisement

'ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು, ಇದು ಸಾಧ್ಯತೆಯ ಕಲೆ'- ಡಿಸಿಎಂ

02:49 PM Oct 23, 2024 IST | BC Suddi
 ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು  ಇದು ಸಾಧ್ಯತೆಯ ಕಲೆ   ಡಿಸಿಎಂ
Advertisement

ಬೆಂಗಳೂರು : ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬೆನ್ನಲ್ಲೇ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಇದು ಸಾಧ್ಯತೆಯ ಕಲೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಷರತ್ತು ವಿಧಿಸದೇ ಯೋಗೇಶ್ವರ್ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ ಎಂದರು.

ಇಂದು ಬೆಳಗ್ಗೆ 8 ಗಂಟೆಗೆ ಯೋಗೇಶ್ವರ್ ನಮ್ಮ ಮನೆಗೆ ಬಂದು ನನ್ನನ್ನು ಭೇಟಿ ಮಾಡಿದರು. ಸಾಕಷ್ಟು ವಿಚಾರ ಚರ್ಚೆ ಮಾಡಿದರು. ನಾನು ಕಾಂಗ್ರೆಸ್‌ನಲ್ಲಿ ಇದ್ದವನು ಮುಂದೆ ಕಾಂಗ್ರೆಸ್ ನಲ್ಲಿ ಇರಬೇಕು ಎಂದು ತೀರ್ಮಾನ ಮಾಡಿದ್ದೇನೆ ಎಂದರು. ಈ ವಿಚಾರವನ್ನು ತಕ್ಷಣವೇ ಸಿಎಂ, ಪಕ್ಷದ ವರಿಷ್ಟರ ಗಮನಕ್ಕೆ ತಂದೆ ಎಂದು ಹೇಳಿದ್ದಾರೆ.

Advertisement

Author Image

Advertisement