ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ! 50 ಕೋಟಿ ಆಫರ್
07:40 AM Mar 02, 2024 IST
|
Bcsuddi
Advertisement
Advertisement
ಹಾಸನ : ಬಿಜೆಪಿಯು ರಾಜ್ಯ ಸರ್ಕಾರವನ್ನು ಅಲುಗಾಡಿಸಲು ಯತ್ನಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದ್ದು ಶಾಸಕರಿಗೆ 50 ಕೋಟಿ ಆಫರ್ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸರ್ಕಾರಗಳನ್ನು ಬೀಳಿಸುವುದು ಅಭ್ಯಾಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ.ಹೀಗಾಗಿ ನಮ್ಮ ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ನೀಡಿದ್ದು, ದೇಶದ ವಿವಿಧೆಡೆ ಸರ್ಕಾರವನ್ನು ಅತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ ಎಂದು ಹೇಳಿದರು.
ಬಿಜೆಪಿಯು ನಮ್ಮ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಆದರೆ, ಕಾಂಗ್ರೆಸ್ನ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದರು.ಅದೇ ರೀತಿ ಶಾಸಕ ರವಿ ಗಣಿಗ ಕೂಡ ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರುಪಾಯಿ ಮತ್ತು ಸಚಿವ ಸ್ಥಾನದ ಆಮಿಷ ನೀಡಲಾಗುತ್ತಿದೆ ಎಂದು ಬಹಿರಂಗ ಆರೋಪ ಮಾಡಿದ್ದರು.
Next Article