ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ರಾಜ್ಯದಲ್ಲಿ ಡಿಸಿಎಂ ಸ್ಥಾನ ಖಾಲಿ ಇಲ್ಲ ಖಾಲಿ ಇದ್ದಾಗ ನೋಡ್ತಾರೆ'- ಚಲುವರಾಯಸ್ವಾಮಿ

05:22 PM Jun 26, 2024 IST | Bcsuddi
Advertisement

ಬೆಳಗಾವಿ: ನಾನು ಯಾರು ಪರ ಇಲ್ಲ, ಯಾರ ವಿರೋಧವೂ ಇಲ್ಲ. ಸದ್ಯಕ್ಕೆ ಡಿಸಿಎಂ ಸ್ಥಾನ ಖಾಲಿ ಇಲ್ಲ ಖಾಲಿ ಇದ್ದಾಗ ನೋಡ್ತಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

Advertisement

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಜಾತ್ಯಾತೀತ ನಿಲುವು ಇರುವ ಪಕ್ಷ. ವೈಯಕ್ತಿಕವಾಗಿ ಕೆಲವರು ಮಾತಾಡಿದ್ದಾರೆ. ಪಕ್ಷ ತೀರ್ಮಾನ ಮಾಡುತ್ತದೆ. ಪಕ್ಷದ ಜವಾಬ್ದಾರಿ ಅಧ್ಯಕ್ಷರು, ಮುಖ್ಯಮಂತ್ರಿ ಇದ್ದಾರೆ ಅವರು ನೋಡಿಕೊಳ್ತಾರೆ. ಡಿಸಿಎಂ ಚರ್ಚೆ ವಿಚಾರದ ಕುರಿತು ನಾನು ಮಾತಾಡಲ್ಲ ಎಂದರು.

ಚನ್ನಪಟ್ಟಣದಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅಧ್ಯಕ್ಷರು ನೋಡಿಕೊಳ್ಳುತ್ತಿದ್ದಾರೆ. ಚನ್ನಪಟ್ಟಣಕ್ಕೆ ಯಾವಾಗ ಬೇಕಾದರೂ ಚುನಾವಣೆ ಘೋಷಣೆಯಾಗಬಹುದು. ಡಿಕೆಶಿ ಅಥವಾ ಡಿಕೆ ಸುರೇಶ್ ಯಾರು ಅಂತಾ ತೀರ್ಮಾನ ಆಗಿಲ್ಲ. ಈ ಬಗ್ಗೆ ಸಿಎಂ, ಡಿಸಿಎಂ ಕುಳಿತು ಚರ್ಚೆ ಮಾಡುತ್ತಾರೆ ಎಂದು ಹೇಳಿದರು.

ಮಂಡ್ಯದಲ್ಲಿ ನನ್ನ ಸೋಲಿಸಲು ಯತ್ನಿಸಿದ್ರು ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮನ್ನ ಸೋಲಿಸಲು ನೋಡಿದ್ರೂ ಆಗ ಜನ ಗೆಲ್ಲಿಸಿದ್ರು. ನಾನು ಜೆಡಿಎಸ್ ನಲ್ಲಿ ಇಲ್ಲಾ ನಮ್ಮ ಪಕ್ಷದ ಪರವಾಗಿ ಕೆಲಸ ಮಾಡಬೇಕು. ನಮ್ಮ ಅಭ್ಯರ್ಥಿ ಗೆಲ್ಲಿಸಲು ಕೆಲಸ ಮಾಡಿದ್ದೇವೆ. ಕುಮಾರಸ್ವಾಮಿ ಅವರು ಕೆಲಸ ಮಾಡಲಿ ಒಂದು ವರ್ಷ ಏನೂ ಮಾತಾಡಲ್ಲ ಎಂದು ತಿಳಿಸಿದರು.

 

Advertisement
Next Article