ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ನಿರತರಾಗಿದ್ದೇವೆ'- ಬಿಎಸ್ ಯಡಿಯೂರಪ್ಪ

05:40 PM Apr 16, 2024 IST | Bcsuddi
Advertisement

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾಡಿಕೊಂಡಿರುವ ಮೈತ್ರಿಯ ಕಾರಣ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ನಿರತರಾಗಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Advertisement

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದೆಲ್ಲೆಡೆ ಬಿಜೆಪಿಗೆ ಅನುಕೂಲಕರವಾದ ವಾತಾವರಣವಿದೆ, ಕಾರಜೋಳ ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದರು.

ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಸಮಾಧಾನಗೊಂಡಿರುವ ಎಲ್ಲರೊಂದಿಗೆ ಮಾತಾಡಿದ್ದೇವೆ, ಒಂದು ಪಕ್ಷವೆಂದ ಮೇಲೆ ಭಿನ್ನಮತ ಇದ್ದೇಇರುತ್ತೆ, ಎಲ್ಲ ಸರಿಹೋಗುತ್ತದೆ ಎಂದು ಹೇಳಿದರು.

ಇನ್ನು ಬಿಜೆಪಿ ಆಡಳಿತದ ವೇಳೆ‌ 40% ಕಮಿಷನ್ ಹೊಡೆದಿದೆ. ಹೀಗಾಗಿ ಮತ ಕೇಳಲು ಬರುವ ಬಿಜೆಪಿ ನಾಯಕರಿಗೆ ಗೋ ಬ್ಯಾಕ್ ಹೇಳಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿರುವ ವಿಚಾರಕ್ಕೆ ತಿರುಗೇಟು ನೀಡಿದ ಅವರು, ಚುನಾವಣೆ ಮುಗಿದು ಫಲಿತಾಂಶ ಬರಲಿ, ಯಾರು ಗೋ ಬ್ಯಾಕ್ ಯಾರು ಕಮ್ ಬ್ಯಾಕ್ ಅನ್ನೋದು ಗೊತ್ತಾಗಲಿದೆ ಎಂದು ತಿಳಿಸಿದರು.

Advertisement
Next Article