ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ.!
07:47 AM Aug 11, 2024 IST | BC Suddi
Advertisement
ಬೆಂಗಳೂರು : ಇದೀಗ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರೀ ಗುಡುಗು, ಸಿಡಿಲು ಹಾಗೂ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹವಾಮಾನ ಇಲಾಖೆ ಎಚ್ಚರಿಕೆಯ ಅಲರ್ಟ್ ನೀಡಿದೆ.
Advertisement
ಮೈಸೂರು, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಭಾರೀ ಗಾಳಿ ಮಳೆ ಹಾಗೂ ಗುಡುಗು ಸಿಡಿಲು ಅಪ್ಪಳಿಸುವ ಸಾಧ್ಯತೆ ಇದೆ, ಆಗಸ್ಟ್ 9 ರಂದು ಸಂಜೆ ಈ ಅಲರ್ಟ್ ನೀಡಿದ್ದು ರಾತ್ರಿಯವರೆಗೂ ಮುಂದುವರಿಯಲಿದೆ.
ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳುವಂತೆ, ಭಾರೀ ಗಾಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಆಗಸ್ಟ್ 9 ರಂದು ಸಂಜೆ 6 ಗಂಟೆಗೆ ಅಲರ್ಟ್ ನೀಡಿದೆ.ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಗುಡುಗು ಸಿಡಿಲು ಬಡಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.