For the best experience, open
https://m.bcsuddi.com
on your mobile browser.
Advertisement

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ.!

07:49 AM Sep 23, 2024 IST | BC Suddi
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ
Advertisement

ಬೆಂಗಳೂರು :  ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement

ನಾಳೆ, ನಾಡಿದ್ದು ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಬೀದರ್​ ಮತ್ತು ಬಾಗಲಕೋಟೆಯಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 23 ರ ಇಂದು ಸೆ.24 ನಾಳೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀಈ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Tags :
Author Image

Advertisement