ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಯಶಸ್ವಿ - 11 ಸಾವಿರ ಅರ್ಜಿ ಸಲ್ಲಿಕೆ
07:08 PM Feb 08, 2024 IST
|
Bcsuddi
Advertisement
ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮ ಯಶಸ್ಸು ಕಂಡಿದ್ದು, ಈ ಕಾರ್ಯಕ್ರಮದಲ್ಲಿ ಸುಮಾರು 11 ಸಾವಿರ ಅರ್ಜಿಗಳು ಸ್ವೀಕಾರವಾಗಿದೆ.
Advertisement
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ವಿಧಾನಸೌಧದಲ್ಲಿ ನಡೆದ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಯಶಸ್ವಿಯಾಗಿದ್ದು, ಕರ್ನಾಟಕದ ಮೂಲೆ ಮೂಲೆಗಳಿಂದ ಬಂದಿದ್ದ ಸಾವಿರಾರು ಜನರ ಸಮಸ್ಯೆ ಆಲಿಸಿದ ಸಿಎಂ ಸ್ಥಳದಲ್ಲಿ ಪರಿಹಾರ ಕೊಟ್ಟಿದ್ದಾರೆ.
ಇನ್ನು ಉಳಿದ ಅರ್ಜಿಗಳಿಗೆ ಒಂದು ತಿಂಗಳಲ್ಲಿ ಪರಿಹಾರ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಳಗ್ಗೆ 11:30 ಕ್ಕೆ ಪ್ರಾರಂಭವಾದ ಜನ ಸ್ಪಂದನ ಕಾರ್ಯಕ್ರಮ ಸಂಜೆ 4:30 ವರೆಗೆ ನಡೆದಿದೆ.
Next Article