ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯಸಭಾ ಅಧ್ಯಕ್ಷ ಧಂಖರ್ ಅಣಕಿಸಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ದೂರು

12:58 PM Dec 20, 2023 IST | Bcsuddi
Advertisement

ನವದೆಹಲಿ: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರನ್ನು ಮಿಮಿಕ್ರಿ ಮಾಡಿ ಅಣಕಿಸಿದ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ವಿರುದ್ಧ ವಕೀಲರೊಬ್ಬರು ದೆಹಲಿಯ ಡಿಫೆನ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement

ಮಂಗಳವಾರ ಸಂಸತ್ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಯಾನರ್ಜಿ ಅವರು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರನ್ನು ಅನುಕರಣೆ ಮಾಡಿ ಅಪಹಾಸ್ಯ ಮಾಡಿದ್ದರು. ಇದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊಬೈಲ್ ನಲ್ಲಿ ಇದನ್ನು ಚಿತ್ರೀಕರಿಸಿದ್ದರು. ಪ್ರತಿಭಟನಾನಿರತ ಸಂಸದರು ನಗುವಿನ ಅಲೆಯಲ್ಲಿ ತೇಲಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ವಿಡಿಯೋ ವೈರಲ್ ಆಗಿತ್ತು.

ಈ ಸಂಬಂಧ ಅಭಿಷೇಕ್ ಗೌತಮ್ ಎಂಬ ವಕೀಲರು ಡಿಫೆನ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಅದನ್ನು ಸ್ವೀಕರಿಸಿದ್ದಾರೆ. ಇದರ ಆಧಾರದ ಮೇಲೆ ತನಿಖೆಯನ್ನೂ ಆರಂಭಿಸಲಾಗಿದೆ. ತಮ್ಮ ದೂರಿನಲ್ಲಿ ಅಭಿಷೇಕ್ ಅವರು ಉಪಾಧ್ಯಕ್ಷರಿಗೆ ಅವಮಾನ ಮಾಡಿದ್ದಾರೆ ಎಂದಿದ್ದು, ಕಲ್ಯಾಣ್ ಬ್ಯಾನರ್ಜಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Advertisement
Next Article