ರಾಜ್ಯ ಸರ್ಕಾರಕ್ಕೆ 1 ವರ್ಷ.! ಸಚಿವರಿಗೆ ಭೋಜನ .!
10:19 AM May 22, 2024 IST | Bcsuddi
Advertisement
ಬೆಂಗಳೂರು : ರಾಜ್ಯ ಸರ್ಕಾರಕ್ಕೆ 1 ವರ್ಷದ ತುಂಬಿದ ಸಂಭ್ರಮ ಹಿನ್ನೆಲೆ ಎಲ್ಲಾ ಸಚಿವರಿಗೆ ಭೋಜನ ಕೂಟ ಆಯೋಜನೆ ಮಾಡಲಾಗಿದೆ.
Advertisement
ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ್ ಅವರು ಸಂಸದ ಡಿಕೆ ಸುರೇಶ್ ನಿವಾಸದಲ್ಲಿ ಇಂದು ರಾತ್ರಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ಸಭೆಯಲ್ಲಿ ಪೆನ್ ಡ್ರೈವ್ ಕೇಸ್, ಲೋಕಸಭೆ ಚುನಾವಣೆ, ರಾಜಕೀಯ ವಿದ್ಯಮಾನಗಳು ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಭೂಜನ ಕೂಟಕ್ಕೆ ಬರುವಂತೆ ಎಲ್ಲಾ ಸಚಿವರುಗಳಿಗೆ ಆಹ್ವಾನ ನೀಡಲಾಗಿದೆ.
ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದರು.ಸಿಎಂ ನಿವಾಸ ಕಾವೇರಿಗೆ ಭೇಟಿ ನಿಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಶುಭಾಶಯ ಕೋರಿದ್ದರು