For the best experience, open
https://m.bcsuddi.com
on your mobile browser.
Advertisement

'ರಾಮಮಂದಿರ ಉದ್ಘಾಟನೆ ಬಳಿಕ ಹೈಕಮಾಂಡ್‌ ಹೇಳಿದರೆ ಮಾತ್ರ ಹೋಗ್ತೀವಿ'- ಪರಮೇಶ್ವರ್

01:06 PM Jan 13, 2024 IST | Bcsuddi
 ರಾಮಮಂದಿರ ಉದ್ಘಾಟನೆ ಬಳಿಕ ಹೈಕಮಾಂಡ್‌ ಹೇಳಿದರೆ ಮಾತ್ರ ಹೋಗ್ತೀವಿ   ಪರಮೇಶ್ವರ್
Advertisement

ಬೆಂಗಳೂರು: ಜನವರಿ 22ರ ನಂತರವೂ ಹೈಕಮಾಂಡ್‌ ಹೇಳಿದರೆ ಮಾತ್ರ ರಾಮ ಮಂದಿರಕ್ಕೆ ಹೋಗ್ತೀವಿ- ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಜ. 22 ನಂತರ ರಾಮ ಮಂದಿರಕ್ಕೆ ಹೋಗುತ್ತೇನೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ‌ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ. ಸರ್ಕಾರದ ಹಂತದಲ್ಲಿ ಈ ಬಗ್ಗೆ ಚರ್ಚೆ ನಡೆದಿಲ್ಲ. ಹೈಕಮಾಂಡ್ ಈಗಾಗಲೇ ರಾಮಮಂದಿರ ಕಾರ್ಯಕ್ರಮಕ್ಕೆ ಹೋಗಬಾರದು ಎಂಬ ನಿಲುವು ತೆಗೆದುಕೊಂಡಿದೆ.ಒಂದು ವೇಳೆ ರಾಮಮಂದಿರ ಉದ್ಘಾಟನೆ ಬಳಿಕ ಹೋಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಿದರೆ ನಾವು ಹೋಗುತ್ತೇವೆ ಎಂದರು.

ಎಲ್ಲವು ನಮ್ಮ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದೇವೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿರುವುದರಿಂದ , ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೋ ಅದರಂತೆ ನಡೆಯಬೇಕು. ನಾವು ಅದರ ವಿರುದ್ದ ನಿಲುವು ‌ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Author Image

Advertisement