For the best experience, open
https://m.bcsuddi.com
on your mobile browser.
Advertisement

'ರಾಷ್ಟ್ರದ ಏಕತೆಗಾಗಿ ರಾಹುಲ್‌ ಗಾಂಧಿಯಂತಹ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ'- ಖರ್ಗೆ ಮಾತಿನ ಎಡವಟ್ಟು

10:43 AM Nov 21, 2023 IST | Bcsuddi
 ರಾಷ್ಟ್ರದ ಏಕತೆಗಾಗಿ ರಾಹುಲ್‌ ಗಾಂಧಿಯಂತಹ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ   ಖರ್ಗೆ ಮಾತಿನ ಎಡವಟ್ಟು
Advertisement

ರಾಜಸ್ಥಾನ: ಈ ರಾಷ್ಟ್ರದ ಏಕತೆಗಾಗಿ ರಾಹುಲ್ ಗಾಂಧಿಯಂತಹ ನಾಯಕರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸುವ ಭರದಲ್ಲಿ ರಾಹುಲ್ ಗಾಂಧಿ ಎಂದು ತಪ್ಪಾಗಿ  ಮಾತನಾಡಿ  ಪೇಚಿಗೆ ಸಿಲುಕಿದ್ದಾರೆ.

ಬಿಜೆಪಿ ಇದನ್ನೇ ಅಸ್ತ್ರವಾಗಿ ಬಳಸಿಕೊಂಡು ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ವ್ಯಂಗ್ಯವಾಡಿದ್ದಾರೆ.
ರಾಜಸ್ಥಾನದ ಅನುಪಗಢದಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಖರ್ಗೆ, ರಾಹುಲ್ ಗಾಂಧಿಯಂತಹ ನಾಯಕರು ಈ ರಾಷ್ಟ್ರದ ಏಕತೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಭಾಷಣದಲ್ಲಿ ತಪ್ಪಿ ಹೇಳಿಕೆ ನೀಡಿದ್ದಾರೆ.

ಬಳಿಕ ವೇದಿಕೆ ಮೇಲಿದ್ದ ನಾಯಕರೊಬ್ಬರು ಕೂಡಲೇ ಖರ್ಗೆ ಅವರ ಗಮನಕ್ಕೆ ವಿಷಯ ತಂದಿದ್ದಾರೆ.ಆದರೆ ಖರ್ಗೆ ಅವರ ಈ ಹೇಳಿಕೆ ಬಿಜೆಪಿ ನಾಯಕರು ಲೇವಡಿ ಮಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ತುಣುಕನ್ನು ಶೇರ್ ಮಾಡಿದ್ದಾರೆ. ಇದು ಬಾರೀ ವೈರಲ್‌ ಆಗಿದೆ.

Advertisement

ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ ಇದಕ್ಕಾಗಿ ಕಾಂಗ್ರೆಸ್ ಬಿಜೆಪಿ ಪೈಪೋಟಿಯಲ್ಲಿ ಪ್ರಚಾರದಲ್ಲಿ ಧುಮಿಕಿದ್ದಾರೆ.

Author Image

Advertisement