ರಾಹುಲ್ ಗಾಂಧಿಯನ್ನು ಬಂಧಿಸುತ್ತೇವೆ: ಸಿಎಂ.!
07:45 AM Jan 25, 2024 IST | Bcsuddi
Advertisement
ಅಸ್ಸಾಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅಸ್ಸಾಂ ಸಿಎಂ ಹಿಮಂತ ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿ ಅವರನ್ನು ಬಂಧಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಈಗ ರಾಹುಲ್ ಗಾಂಧಿ ವಿರುದ್ಧ ಯಾವುದೇ ಕ್ರಮ ಕೈಗೊಂಡರೆ ಅದನ್ನು ರಾಜಕೀಯ ನಡೆ ಎನ್ನಲಾಗುತ್ತದೆ ಎಂದು ಹಿಮಂತ ಹೇಳಿದ್ದಾರೆ.
Advertisement
ಭಾರತ್ ಜೋಡೋ ನ್ಯಾಯ ಯಾತ್ರೆ' ವೇಳೆ ರಾಹುಲ್ ವಿರುದ್ಧ ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿದ ಒಂದು ದಿನದ ನಂತರ ಸಿಎಂ ಈ ಹೇಳಿಕೆ ನೀಡಿದ್ದಾರೆ.