For the best experience, open
https://m.bcsuddi.com
on your mobile browser.
Advertisement

ರಾಹುಲ್​ ಗಾಂಧಿ ವಿರುದ್ಧ ಬಿಜೆಪಿ ನಾಯಕರಿಂದ ದೂರು ದಾಖಲು

12:18 PM Sep 21, 2024 IST | BC Suddi
ರಾಹುಲ್​ ಗಾಂಧಿ ವಿರುದ್ಧ ಬಿಜೆಪಿ ನಾಯಕರಿಂದ ದೂರು ದಾಖಲು
Advertisement

ಬೆಂಗಳೂರು :ಮೀಸಲಾತಿ ಬಗ್ಗೆ ಅಮೆರಿಕದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ರಾಹುಲ್​ ಗಾಂಧಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿಯಿಂದ ದೂರು ಸಲ್ಲಿಸಲಾಗಿದೆ.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಸೇರಿ ಬಿಜೆಪಿ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ಅಮೆರಿಕ ಪ್ರವಾಸ ಕೈಗೊಂಡ ಸಮಯದಲ್ಲಿ ರಾಹುಲ್‌ ಗಾಂಧಿ ಅವರು, ‘ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್‌ ಪಕ್ಷ ಚಿಂತಿಸಲಿದೆ ಎಂದು ಹೇಳಿದ್ದರು.

Advertisement

ನಂತರದ ಮಾಧ್ಯಮ ಸಂವಾದದಲ್ಲಿ, ನಾನು ಮೀಸಲಾತಿಗೆ ವಿರುದ್ಧವಾಗಿ ಇದ್ದೇನೆ ಎಂಬಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಮೀಸಲಾತಿ ಮಿತಿಯನ್ನು ನಾವು ಶೇ 50 ಮೀರಿ ವಿಸ್ತರಿಸಲಿದ್ದೇವೆ’ ಎಂದು ಸ್ಪಷ್ಟಪಡಿಸಿದ್ದರು.

ಈ ಸಂಬಂಧ ರಾಜ್ಯದೆಲ್ಲೆಡೆ ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ. ಸಂವಿಧಾನವನ್ನು ಗೌರವಿಸುವ ಯಾರೊಬ್ಬರೂ ರಾಹುಲ್‌ ಗಾಂಧಿ ಅವರ ನಡೆಯನ್ನು ಒಪ್ಪುವುದಿಲ್ಲ ಎಂದು ಟೀಕಿಸಿದ್ದಾರೆ.ರಾಹುಲ್ ಗಾಂಧಿ ಅವರ ನಾಲಗೆ ಕತ್ತರಿಸುವ ವ್ಯಕ್ತಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಬಣದ ಶಾಸಕ ಸಂಜಯ್‌ ಗಾಯಕ್‌ವಾಡ್‌ ಹೇಳಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Author Image

Advertisement