ರಿಯಾಸಿಯಲ್ಲಿ ಉಗ್ರರ ದಾಳಿ; ಓರ್ವ ಆರೋಪಿಯ ಬಂಧನ
06:07 PM Jun 19, 2024 IST
|
Bcsuddi
Advertisement
ಶ್ರೀನಗರ: ರಿಯಾಸಿಯಲ್ಲಿ ಇತ್ತೀಚೆಗೆ ಯಾತ್ರಾರ್ಥಿಗಳ ಬಸ್ ಮೇಲೆ ನಡೆದ ಭಯೋತ್ಪಾದಕರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಇಂದು ಬಂಧಿಸಿದ್ದಾರೆ.
Advertisement
ಯಾತ್ರಾರ್ಥಿಗಳ ಬಸ್ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಮೊದಲ ಆರೋಪಿಯ ಬಂಧನವಾಗಿದೆ. ಬಂಧಿತ ಆರೋಪಿಯು ಈ ದಾಳಿ ಪ್ರಕರಣದ ಮಾಸ್ಟರ್ ಮೈಂಡ್ ಅಲ್ಲ. ಆದರೆ, ಈತ ಈ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿ ಹಕೀಮ್ ದಿನ್ ರಾಜೌರಿ ನಿವಾಸಿಯಾಗಿದ್ದಾನೆ. ಹಾಗೂ ಈ ದಾಳಿಗೆ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಒದಗಿಸಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 9 ರಂದು ರಿಯಾಸಿ ಜಿಲ್ಲೆಯಲ್ಲಿ ಉಗ್ರರು ಯಾತ್ರಾರ್ಥಿಗಳ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಮಹಿಳೆಯರು ಸೇರಿದಂತೆ 9 ಜನರು ಸಾವನ್ನಪ್ಪಿದರು. ಘಟನೆಯಲ್ಲಿ 33 ಜನ ಗಾಯಗೊಂಡಿದ್ದರು.
Next Article